ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಂತಿ ತಗುಲಿ ಸಾವು

Last Updated 23 ಮೇ 2018, 9:18 IST
ಅಕ್ಷರ ಗಾತ್ರ

ಕಲಬುರ್ಗಿ: ರಾಮಮಂದಿರ ವೃತ್ತದ ಸಮೀಪ ವಿದ್ಯುತ್ ತಂತಿ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮೂರು ಜನ ಗಾಯಗೊಂಡಿದ್ದಾರೆ.

ತಾರಫೈಲ್ ಬಡಾವಣೆ ನಿವಾಸಿ ಅಮ್ಜದ್ ಅಲಿ (50) ಮೃತಪಟ್ಟವರು. ಬಸವರಾಜ, ಅಬ್ದುಲ್ ಕರೀಮ್, ಮಹ್ಮದ್ ಅವರಿಗೆ ಗಾಯಗಳಾಗಿದ್ದು, ಅವರನ್ನು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಎಲ್ಲರೂ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಈ ವೇಳೆ ಲಾರಿಯಲ್ಲಿ ಟಿನ್ ಶೀಟ್‌ಗಳು ಬಂದಿವೆ. ಅವುಗಳನ್ನು ಕೆಳಗೆ ಇಳಿಸುತ್ತಿರುವಾಗ ಸರ್ವಿಸ್ ವೈರ್ ತಗುಲಿದೆ. ಸ್ಥಳೀಯರು ಯಾಗಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT