ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಅವರು, ದೊಮ್ಮಲೂರಿನ ಹಿಲ್ಟನ್ ಹೋಟೆಲ್ನಲ್ಲಿ ತಂಗಿರುವ ಪಕ್ಷದ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ‘ಆಡಳಿತ ನಡೆಸುವಾಗ ಸಮಸ್ಯೆ ಹಾಗೂ ಗೊಂದಲಗಳು ಎದುರಾದರೆ, ಎರಡೂ ಪಕ್ಷಗಳ ಮುಖಂಡರು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ. ಸಮ್ಮಿಶ್ರ ಸರ್ಕಾರದ ಅಳಿವು–ಉಳಿವು ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಜಾಗರೂಕತೆಯಿಂದ ಇರಿ’ ಎಂದಿದ್ದಾರೆ.