ಬಹುಮಾನಿತ ಹಸ್ತಪ್ರತಿಯ ಪುಸ್ತಕವನ್ನು ಪ್ರಕಟಿಸಿ, ಕತೆಗಾರರಿಗೆ ₹ 30 ಸಾವಿರ ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಪಾರಿತೋಷಕವನ್ನು ನೀಡಲಾಗುತ್ತದೆ. ಹಸ್ತಪ್ರತಿಗಳ ಮೊದಲ ಸುತ್ತಿನ ಆಯ್ಕೆಯನ್ನು ಶ್ರೀಕಾಂತ ಉಡುಪ, ಕರ್ಕಿ ಕೃಷ್ಣಮೂರ್ತಿ ಮತ್ತು ವಸುಧೇಂದ್ರ ಮಾಡಿದ್ದಾರೆ. ಜೂನ್ 10ರಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.