ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊರ ಜನರ ನೀರಿಗಾಗಿ ಬಾವಿ ತೋಡಿದ 70ರ ವೃದ್ಧ

Last Updated 24 ಮೇ 2018, 15:20 IST
ಅಕ್ಷರ ಗಾತ್ರ

ಹದುವಾ(ಮಧ್ಯಪ್ರದೇಶ): ವಿಶ್ರಾಂತಿ ಪಡೆಯಬೇಕಾದ ವಯಸ್ಸಿನಲ್ಲಿ ಮಧ್ಯಪ್ರದೇಶದ 70ರ ವಯೋವೃದ್ಧ ಸೀತಾರಾಮ್‌ ರಜಪೂತ್‌ ಊರಿನ ನೀರಿನ ಕೊರತೆ ನೀಗಿಸಲು ಬಾವಿ ತೋಡುತ್ತಿದ್ದಾರೆ.

ಛತ್ತರ್‌ಪುರ ಪಂಚಾಯಿತಿ ವ್ಯಾಪ್ತಿಯ ಹದುವಾ ಹಳ್ಳಿ ಎರಡು ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದೆ. ಇದನ್ನು ಪರಿಹರಿಸಲು ಸೀತಾರಾಮ್‌ ಮುಂದಾಗಿದ್ದಾರೆ. ಆತ್ಮವಿಶ್ವಾಸದ ಕೊರತೆಯಿರದ ಇಂತಹ ಜೀವಕ್ಕೆ ಸರ್ಕಾರದ ಮಾತಿರಲಿ, ಸ್ವಂತ ಊರಿನವರೇ ಸಹಾಯಕ್ಕೆ ಬಂದಿಲ್ಲ. ಯಾರಿಂದಲೂ ಸಹಾಯಹಸ್ತದ ನಿರೀಕ್ಷೆ ಮಾಡದೆ, ತಮ್ಮ ಕಾಯಕದಲ್ಲಿ ತೊಡಗಿದ್ದಾರೆ ಸೀತಾರಾಮ್‌.

ನೀರಿಗಾಗಿ ಇವರು 2015ರಿಂದ ಬಾವಿ ತೋಡಲು ಆರಂಭಿಸಿದ್ದರು. ಅದು 2017ರಲ್ಲಿ ಪೂರ್ಣಗೊಂಡಿತ್ತು. ಒಂದಷ್ಟು ನೀರು ಜಿನುಗಿತ್ತು. ದುರಾದೃಷ್ಟವಶಾತ ಆ ಬಾವಿ ಮಳೆಗಾಲದಲ್ಲಿ ಮಣ್ಣು ಕುಸಿತದಿಂದ ಮುಚ್ಚಲ್ಪಟ್ಟಿತು.

ಆದರೆ ಸೀತಾರಾಮ್‌ ಇದಕ್ಕೆ ಎದೆಗುಂದಲಿಲ್ಲ. ಮತ್ತೆ ಪ್ರಯತ್ನ ಆರಂಭಿಸಿ 33 ಅಡಿ ಆಳದಷ್ಟು ಕಂದಕ ಕೊರೆದಿದ್ದಾರೆ. 18 ತಿಂಗಳಿನಿಂದ ಮುಂಜಾನೆಯಿಂದ ಸೂರ್ಯ ನೆತ್ತಿಯ ಮೇಲೆ ಬರುವವರೆಗೂ, ಸಂಜೆಯಿಂದ ಕತ್ತಲಾಗುವವರೆಗೂ ನೆಲವನ್ನು ಅಗೆದಿದ್ದಾರೆ. ಮಣ್ಣುನ್ನು ತಗ್ಗಿಂದ ತಂದು ಹೊರಹಾಕಿದ್ದಾರೆ. ಈಗ ಮತ್ತೇ ನೀರು ಜಿನುಗಿ ಊರ ಜನರ ದಾಹ ತಣಿಸಲಿದೆ ಎಂಬ ಭರವಸೆ ಅವರದ್ದಾಗಿದೆ.

ಈಗ ತೋಡಿರುವ ಬಾವಿ ಪುನ: ಕುಸಿಯದಂತೆ ಗೋಡೆಗೆ ಪ್ಲಾಸ್ಟರಿಂಗ್‌ ಮಾಡಲು ಸರ್ಕಾರ ನೆರವನ್ನು ಸೀತಾರಾಮ್‌ ಎದುರು ನೋಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT