‘ನಮಗೆ ಕುಮಾರಸ್ವಾಮಿ ಅವರ ಮೇಲೆ ಭರವಸೆ ಇದೆ. ಅವರು ಎಲ್ಲ ಸಮುದಾಯಗಳ ಪರವಾಗಿ ನಿಲ್ಲುತ್ತಾರೆ ಎನ್ನುವ ನಂಬಿಕೆ ಇದೆ. ಹೀಗಾಗಿ, ತಮ್ಮ ಅಧಿಕಾರದ ಅವಧಿಯಲ್ಲಿ ಕುರುಬ ಸಮುದಾಯದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ, ಮೀಸಲಾತಿಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಲು ಮುಂದಾಗಬೇಕು. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಸರಿಯಾದ ನಿರ್ಧಾರ ಪ್ರಕಟಿಸಬೇಕು. ಮೀಸಲಾತಿ ಜಾರಿಯಾದರೆ ಸಮುದಾಯವು ಅವರಿಗೆ ಹೆಚ್ಚಿನ ಗೌರವ ನೀಡುತ್ತದೆ’ ಎಂದರು.