2016ರಲ್ಲಿ ನಡೆದಿದ್ದ ತೇಜಸ್ ಗೌಡ ಅಪಹರಣ ಹಾಗೂ ಈ ಪ್ರಕರಣದಲ್ಲಿ ₹ 10 ಲಕ್ಷ ಲಂಚ ಸ್ವೀಕರಿಸಿದ ಆರೋಪ ಎದುರಿಸಿ, ಚಿಕ್ಕಮಗಳೂರಿನ ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಗಳಲ್ಲಿ ಪ್ರವೀಣ್ ಖಾಂಡ್ಯ ಆರೋಪಿಯಾಗಿದ್ದ. ಪ್ರಕರಣ ಬೆಳಕಿಗೆ ಬಂದ ಕೂಡಲೇ ತಲೆ ಮರೆಸಿಕೊಂಡಿದ್ದ ಈತನಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.