ಮೈಸೂರು: ತಮಿಳುನಾಡಿನ ತೂತ್ತುಕುಡಿಯಲ್ಲಿ ನಡೆದ ಗೋಲಿಬಾರ್ ಘಟನೆಯನ್ನು ಖಂಡಿಸಿ ಎಡಪಕ್ಷಗಳ ಜಂಟಿ ಸಮಿತಿ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಸಿಪಿಐ, ಸಿಪಿಎಂ, ಸಿಪಿಎಂಎಲ್ ಲಿಬರೇಷನ್ ಮತ್ತು ಎಸ್ಯುಸಿಐ (ಕಮ್ಯುನಿಸ್ಟ್) ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.