ಶುಕ್ರವಾರ ಸಭಾಧ್ಯಕ್ಷರ ಆಯ್ಕೆ ಬಳಿಕ, ವಿಶ್ವಾಸಮತ ಯಾಚನೆ ಪ್ರಸ್ತಾಪ ಮಂಡಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಭಾಷಣದ ನಂತರ ಮಾತನಾಡಿದ ಯಡಿಯೂರಪ್ಪ ಅವರು, ‘ಹಳೆಯ ಘಟನೆಗಳನ್ನು ಮೆಲುಕು ಹಾಕಿದರು. ರೈತರ ಸಾಲ ಮನ್ನಾ ವಿಚಾರ ಕುರಿತು ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ₹ 57 ಸಾವಿರ ಕೋಟಿ ಸಾಲ, ಖಾಸಗಿಯವರ ಬಳಿ ಮಾಡಿರುವ ಸಾಲವನ್ನೂ ಮನ್ನಾ ಮಾಡುವುದಾಗಿ ಹೇಳಿದ್ದೀರಿ. ಅದರಂತೆ ಮನ್ನಾ ಮಾಡಿ. ಮಾತು ತಪ್ಪಿದರೆ, ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ’ ಎಂದು ಘೋಷಿಸಿದರು.