ವಿಧಾನಸಭೆಯಲ್ಲಿ ಶುಕ್ರವಾರ ವಿಶ್ವಾಸಮತ ಯಾಚಿಸಿ ಮಾತನಾಡಿದ ಅವರು, ‘ಸಾಲ ಮನ್ನಾ ಮಾಡುವುದಿಲ್ಲ ಎಂದು ಹೇಳಿಲ್ಲ. ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದ್ದರೆ 24 ಗಂಟೆಗಳಲ್ಲೇ ಘೋಷಣೆ ಮಾಡುತ್ತಿದ್ದೆ. ಈಗ ಇರುವುದು ಸಮ್ಮಿಶ್ರ ಸರ್ಕಾರ. ಹೀಗಾಗಿ, ಏಕಾಂಗಿಯಾಗಿ ಘೋಷಣೆ ಮಾಡಲು ಆಗುವುದಿಲ್ಲ. ಕಾಂಗ್ರೆಸ್ ನಾಯಕರ ಜತೆಗೆ ಚರ್ಚಿಸಬೇಕಿದೆ’ ಎಂದರು.