ಬಳ್ಳಾರಿ ವಿಭಾಗದ ಗಣಿ ಸುರಕ್ಷಾ ನಿರ್ದೇಶಕ ಮನೀಶ್ ಮುರ್ಕುಟೆ, ‘ಗಣಿಗಾರಿಕೆಯಲ್ಲಿ ಆಧುನಿಕ ಯಂತ್ರಗಳ ಅಳವಡಿಕೆ, ಮುನ್ನೆಚ್ಚರಿಕೆ ಕ್ರಮ, ಕಾರ್ಮಿಕರ ತರಬೇತಿಯಂಥ ಕಾರ್ಯಕ್ರಮಗಳಿಂದ ಅಪಘಾತಗಳ ಪ್ರಮಾಣ ಇಳಿಕೆಯಾಗಿದೆ. ಮೂರು ದಶಕಗಳ ಹಿಂದೆ ಶೇ 1.25 ಇದ್ದ ಅಪಘಾತಗಳ ಪ್ರಮಾಣ ಈಗ ಶೇ 0.4ಕ್ಕೆ ತಗ್ಗಿದೆ. ಕಲ್ಲಿದ್ದಲು ಗಣಿಗಳಲ್ಲಿ ಅವಘಡಗಳು ಸಂಭವಿಸುತ್ತಿದ್ದು, ಅವುಗಳನ್ನು ಶೂನ್ಯ ಪ್ರಮಾಣಕ್ಕಿಳಿಸುವ ಗುರಿ ಹೊಂದಿದ್ದೇವೆ’ ಎಂದರು.