ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಹುಳುಗಳ ಕೊಠಡಿಗೆ ನುಗ್ಗಿದ್ದ ಚಿರತೆ ಸೆರೆ

Last Updated 26 ಮೇ 2018, 8:18 IST
ಅಕ್ಷರ ಗಾತ್ರ

ರಾಮನಗರ: ಕನಕಪುರ ತಾಲ್ಲೂಕಿನ ಬೇಲಿ ಕೊತ್ತನೂರು ಗ್ರಾಮದ ರೇಷ್ಮೆ ಹುಳು ಸಾಕಾಣಿಕೆ ಕೊಠಡಿಗೆ ಹೊಕ್ಕಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಶನಿವಾರ ಮುಂಜಾನೆ ಆಹಾರ ಹುಡುಕುತ್ತ ಮನೆಗೆ ನುಗ್ಗಿದ ಚಿರತೆ ಕೊಠಡಿಯಲ್ಲಿದ್ದ ತಮ್ಮಯ್ಯ ಎಂಬುವರ ಮೇಲೆ ದಾಳಿ ನಡೆಸಿತು. ಈ ಸಂದರ್ಭ ಮನೆಯಲ್ಲಿದ್ದ ಜಗದೀಶ ಎಂಬುವರು ನೆರವಿಗೆ ಧಾವಿಸಿದರು. ಬಳಿಕ ಚಿರತೆಯನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದರು.

ಗಾಯಾಳು ತಮ್ಮಯ್ಯ ಅವರನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆಯನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT