ಶ್ರೀನಗರ : ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಬಳಿ ಗಡಿನಿಯಂತ್ರಣ ರೇಖೆ ದಾಟಿ ದೇಶದೊಳಗೆ ನುಸುಳುವ ಉಗ್ರರ ಯತ್ನವನ್ನು ಸೇನೆ ವಿಫಲಗೊಳಿಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.
‘ತಂಗಧಾರ್ ಸೆಕ್ಟರ್ ವ್ಯಾಪ್ತಿಯಲ್ಲಿ ದೇಶದೊಳಗೆ ನುಗ್ಗಲು ಯತ್ನಿಸಿದ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ’ ಎಂದು ಶ್ರೀನಗರದ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.