ಬೆಂಗಳೂರು: ಎಸ್ಎಸ್ಎಲ್ಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಇದೇ 29ರವರೆಗೂ ವಿಸ್ತರಿಸಲಾಗಿದೆ.
ಉತ್ತರ ಪತ್ರಿಕೆಗಳ ಛಾಯಾಪ್ರತಿ ಪಡೆದ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲು ಕೋರಿದ್ದರು. ಅದರ ಅನ್ವಯ ವಿಸ್ತರಣೆ ಮಾಡಲಾಗಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.