ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣೆ
ಗಳಲ್ಲಿ ಇವಿಎಂ ದುರ್ಬಳಕೆ ಮಾಡಲಾಗುತ್ತಿದೆ ಎಂಬ ಸಂಶಯ ಹಲವು ಸಮಯದಿಂದ ಇದೆ. ಈ ಬಾರಿಯ ಚುನಾವಣೆಯ ಫಲಿತಾಂಶವೂ ಕೆಲವು ಕಡೆಗಳಲ್ಲಿ ಅಂತಹ ಅನುಮಾನಕ್ಕೆ ಎಡೆಮಾಡಿದೆ. ಇವಿಎಂ ದುರ್ಬಳಕೆ ಸಂಪೂರ್ಣವಾಗಿ ಅಸಾಧ್ಯ ಎಂಬುದನ್ನು ನಿರೂಪಿಸಲು ಚುನಾವಣಾ ಆಯೋಗವೇ ಹ್ಯಾಕಥಾನ್ ನಡೆಸಬೇಕು’ ಎಂದು ಒತ್ತಾಯಿಸಿದರು.