ಬೆಂಗಳೂರು: ‘ವಿಧಾನಸಭೆ ಸಚಿವಾಲಯ ಕಾರ್ಯದರ್ಶಿ ಎಸ್.ಮೂರ್ತಿ ನೇತೃತ್ವದಲ್ಲಿ ತಮ್ಮ ಕಚೇರಿ ಬೀಗ ಮುರಿದು, ಅಕ್ರಮವಾಗಿ ಒಳ ಪ್ರವೇಶಿಸಿ ಕೆಲವು ಮಹತ್ವದ ದಾಖಲೆಗಳು, ಚೆಕ್ ಪುಸ್ತಕಗಳನ್ನು ಸಾಗಿಸಲಾಗಿದೆ’ ಎಂದು ಆರೋಪಿಸಿ ವಿಧಾನಸೌಧ ಪೊಲೀಸರಿಗೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಶಶಿಕಲಾ ಭಟ್ ದೂರು ನೀಡಿದ್ದಾರೆ.