ಎಚ್.ಡಿ.ಕೋಟೆ, ಹುಣಸೂರು, ಮೈಸೂರು ಉತ್ತರ, ನಂಜನಗೂಡು ಶಿಕ್ಷಣ ವಿಭಾಗಗಳಲ್ಲಿ ಹೆಚ್ಚಿನ ಮಕ್ಕಳು ಶಾಲೆ ತೊರೆದಿದ್ದಾರೆ. ಬುಡಕಟ್ಟು ಸಮುದಾಯದವರು ಹೆಚ್ಚು ಇರುವ ಪ್ರದೇಶಗಳಲ್ಲಿ ಈ ಸಮಸ್ಯೆ ಇದೆ. ಕೆಲ ಪೋಷಕರು ತಮ್ಮ ಮಕ್ಕಳನ್ನು ದುಡಿಮೆ ಹಚ್ಚುತ್ತಾರೆ. ಇನ್ನೂ ಕಾರ್ಮಿಕರು ವಲಸೆ ಹೋದ ಸ್ಥಳಗಳಲ್ಲಿ ಶಾಲೆಗಳು ಇರುವುದಿಲ್ಲ. ಹೀಗಾಗಿ, ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸುಮಾರು 282 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದರು.