ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ ಮಾಡಿದ ಕುಮಾರಸ್ವಾಮಿ

Last Updated 27 ಮೇ 2018, 12:47 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಭಾನುವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರನ್ನು ಅರಮನೆ ರಸ್ತೆಯಲ್ಲಿರುವ ಅವರ 'ಶಾಂತಿನಿವಾಸ' ದಲ್ಲಿ ಭೇಟಿ ಮಾಡಿದರು.

ಮಧ್ಯಾಹ್ನದ ಭೋಜನವನ್ನು ಮುಖ್ಯ ನ್ಯಾಯಮೂರ್ತಿ ಜತೆಯಲ್ಲಿ ಮಾಡಿ ಸುಮಾರು ಎರಡು ಗಂಟೆ ಕಾಲ 'ಶಾಂತಿನಿವಾಸ'ದಲ್ಲೇ ಇದ್ದರು. ಇಬ್ಬರೂ ಏನು ಚರ್ಚಿಸಿದರು ಎಂಬುದು ತಿಳಿದು ಬಂದಿಲ್ಲ.

ಆದಾಗ್ಯೂ, 'ಇದೊಂದು ಶಿಷ್ಟಾಚಾರದ ಭೇಟಿಯಾಗಿತ್ತು. ಈ ವೇಳೆ ಕುಮಾರಸ್ವಾಮಿ ಅವರು ಹೈಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಸ್ಥಾನ ಭರ್ತಿಗೆ ಶೀಘ್ರ ಗಮನ ಹರಿಸುವಂತೆ ದಿನೇಶ್ ಮಾಹೇಶ್ವರಿ ಅವರಿಗೆ ಮನವಿ ಮಾಡಿದರು' ಎಂದು ಮೂಲಗಳು ತಿಳಿಸಿವೆ.

ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿಗಳ ಮಂಜೂರು ಸಂಖ್ಯೆ ಒಟ್ಟು 62. ಸದ್ಯ 30 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಇದೇ 31ಕ್ಕೆ ನಿವೃತ್ತಿ ಆಗಲಿದ್ದಾರೆ. ಮುಂದಿನ ತಿಂಗಳ (ಜೂನ್) 15ಕ್ಕೆ ನ್ಯಾಯಮೂರ್ತಿ ಬಿ.ಶ್ರೀನಿವಾಸೇಗೌಡ ನಿವೃತ್ತಿ ಆಗಲಿದ್ದು ಇದೇ ವರ್ಷದ ಸೆಪ್ಟೆಂಬರ್ 30ಕ್ಕೆ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ನಿವೃತ್ತಿ ಆಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT