ಸಂಚಾರ ನಿಯಮ ಪಾಲಿಸಿ: ‘ಹಲವು ಅಪಘಾತಗಳು ವಾಹನ ಚಾಲಕರ ಬೇಜವಾಬ್ದಾರಿಯಿಂದಲೇ ಆಗುತ್ತವೆ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿರುವುದು, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಮೊಬೈಲ್ ಬಳಕೆ ಮಾಡುವುದು ಮುಂತಾದ ಕಾರಣಗಳಿಂದ ಅವಘಡಗಳಾಗುತ್ತವೆ. ಸಂಚಾರ ನಿಯಮದ ಕಟ್ಟುನಿಟ್ಟಿನ ಪಾಲನೆಯಿಂದ ಮಾತ್ರ ಸಾವು–ನೋವು ಕಡಿಮೆಯಾಗಲು ಸಾಧ್ಯ’ ಎನ್ನುತ್ತಾರೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ.