ಭಾನುವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ 78 ಸ್ಥಾನಗಳನ್ನು ಪಡೆಯುವಲ್ಲಿ ಸಿದ್ದರಾಮಯ್ಯ ಅವರ ಶ್ರಮವಿದೆ. ಅಲ್ಪಸಂಖ್ಯಾತರು ಹಾಗೂ ಕುರುಬರ ಮತಗಳನ್ನು ಒಟ್ಟು ಮಾಡಿದ ಪರಿಣಾಮ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಪಡೆಯಲು ಸಾಧ್ಯವಾಯಿತು. ಇಲ್ಲಿಯವರೆಗೂ ಸಿದ್ದರಾಮಯ್ಯ ಅವರನ್ನು ತಲೆಯ ಮೇಲೆ ಹೊತ್ತು ತಿರುಗುತ್ತಿದ್ದ ಹೈಕಮಾಂಡ್, ಈಗ ಕೆಳಗೆ ಬಿಸಾಡಿದೆ’ ಎಂದರು.