ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ. ಚಟುವಟಿಕೆಯಿಂದ ಕೆಲಸ ಮಾಡುವ ಮಧ್ಯ ವಯಸ್ಕರಿಗೆ ಈ ಹುದ್ದೆ ನೀಡುವುದು ಸೂಕ್ತ. ಎಂ.ಬಿ. ಪಾಟೀಲ ಈ ಹುದ್ದೆಗೆ ಸಮರ್ಥರು ಹಾಗೂ ಕ್ರಿಯಾಶೀಲರಾಗಿ ಕೆಲಸ ಮಾಡಬಲ್ಲರು. ಅರ್ಹರನ್ನು ಅಧಿಕಾರಕ್ಕೆ ತಂದರೆ ಕೆಲಸಗಳಾಗುತ್ತವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.