ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದೀಪ್ ಸಿಂಗ್ ಪ್ರತಿಮೆ ಸ್ಥಾಪನೆಗೆ ನಿರ್ಧಾರ

Last Updated 27 ಮೇ 2018, 19:30 IST
ಅಕ್ಷರ ಗಾತ್ರ

ಜೈಪುರ: ಭಾರತ ಹಾಕಿ ತಂಡದ ನಾಯಕರಾಗಿದ್ದ ಸಂದೀಪ್ ಸಿಂಗ್ ಅವರ ಪ್ರತಿಮೆಯನ್ನು ಇಲ್ಲಿನ ಮೇಣದ ವಸ್ತು ಸಂಗ್ರಹಾಲಯದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಮೂಲಕ ಅವರು ಪ್ರತಿಷ್ಠಿತರ ಸಾಲಿಗೆ ಸೇರಲಿದ್ದಾರೆ. ಮಹಾತ್ಮ ಗಾಂಧೀಜಿ, ಮಹಾರಾಣ ಪ್ರತಾಪ್‌, ಸುಭಾಷ್ ಚಂದ್ರ ಬೋಸ್‌, ಭಗತ್ ಸಿಂಗ್‌, ಮದರ್ ತೆರೇಸಾ, ಅಮಿತಾಭ್ ಬಚ್ಚನ್‌, ಸಚಿನ್ ತೆಂಡೂಲ್ಕರ್‌ ಮುಂತಾದವರ ಪ್ರತಿಮೆಯನ್ನು ಈಗಾಗಲೇ ಇಲ್ಲಿ ಸ್ಥಾಪಿಸಲಾಗಿದೆ.

‘ಇದು ನನಗೆ ಲಭಿಸಿದ ದೊಡ್ಡ ಗೌರವ. ಈ ತೀರ್ಮಾನ ಕೈಗೊಂಡವರಿಗೆ ನಾನು ಕೃತಜ್ಞನಾಗಿದ್ದೇನೆ. ಮುಂದಿನ ತಿಂಗಳು ಪ್ರತಿಮೆ ಅನಾವರಣಗೊಳ್ಳುವ ಸಾಧ್ಯತೆ ಇದೆ. ಜುಲೈ 13ರಂದು ನನ್ನ ಜೀವನ ಚರಿತ್ರೆ ಆಧಾರಿತ ಚಿತ್ರ ಬಿಡುಗಡೆಯಾಗಲಿದೆ’ ಎಂದು ಸಂದೀಪ್‌ ಸುದ್ದಿಸಂಸ್ಥೆಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT