ಜೈಪುರ: ಭಾರತ ಹಾಕಿ ತಂಡದ ನಾಯಕರಾಗಿದ್ದ ಸಂದೀಪ್ ಸಿಂಗ್ ಅವರ ಪ್ರತಿಮೆಯನ್ನು ಇಲ್ಲಿನ ಮೇಣದ ವಸ್ತು ಸಂಗ್ರಹಾಲಯದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಮೂಲಕ ಅವರು ಪ್ರತಿಷ್ಠಿತರ ಸಾಲಿಗೆ ಸೇರಲಿದ್ದಾರೆ. ಮಹಾತ್ಮ ಗಾಂಧೀಜಿ, ಮಹಾರಾಣ ಪ್ರತಾಪ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಮದರ್ ತೆರೇಸಾ, ಅಮಿತಾಭ್ ಬಚ್ಚನ್, ಸಚಿನ್ ತೆಂಡೂಲ್ಕರ್ ಮುಂತಾದವರ ಪ್ರತಿಮೆಯನ್ನು ಈಗಾಗಲೇ ಇಲ್ಲಿ ಸ್ಥಾಪಿಸಲಾಗಿದೆ.