ಈ ನಡುವೆ ಸಾಲಮನ್ನಾ ವಿಚಾರದಲ್ಲಿ ಕುಮಾರಸ್ವಾಮಿ ಅವರು ನುಡಿದಂತೆ ನಡೆಯಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು, ಹಾಸನ ನಗರದ ವಿವಿಧೆಡೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಕಡೆ ಬೆಂಕಿ ಹಚ್ಚುವುದಕ್ಕೆ ಪೊಲೀಸರು ಅಡ್ಡಿಪಡಿಸಿದರು.
ಅಲ್ಲದೇ ಬಂದ್ ಗೆ ಕರೆ ಕೊಟ್ಟಿದ್ದರೂ, ತೆರೆದಿದ್ದ ಕೆಲ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸುವ ಪ್ರಯತ್ನ ಮಾಡಿದರು. ರೈತರ ಸಾಲ ಮನ್ನಾ ಮಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.