ಬಿ.ಎಂ.ರಸ್ತೆಗೆ ಹೊಂದಿಕೊಂಡಂ ತಿರುವ ಕುಂದನಹಳ್ಳಿ ಗ್ರಾಮದ ಮುಖ್ಯರಸ್ತೆಯಿಂದ ಅಂಗನವಾಡಿ ಕೇಂದ್ರದವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿತ್ತು. ಅದನ್ನು ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಶಿವಣ್ಣ ಹಲವು ಬಾರಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ, ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದರಿಂದ ರೋಸಿ ಹೋದ ಶಿವಣ್ಣ ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೆ ದೂರು ನೀಡಿದರು. ಅಲ್ಲಿಯೂ 6 ತಿಂಗಳು ಕಾದರೂ ರಸ್ತೆ ದುರಸ್ತಿ ಬಗ್ಗೆ ಗಮನಹರಿಸದಿದ್ದಾಗ ಸರ್ಕಾರದ ಮುಖ್ಯ ಕಾರ್ಯದರ್ಶಿ, ಲೋಕಾಯುಕ್ತ, ಲೋಕೋಪಯೋಗಿ ಸಚಿವ, ಮುಖ್ಯಮಂತ್ರಿ, ರಾಜ್ಯಪಾಲ, ಪ್ರಧಾನಮಂತ್ರಿ, ರಾಷ್ಟ್ರಪತಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು.