ಮಾವು ಬೆಳೆಗಾರರ ಹಾಗೂ ಖರೀದಿ ಕೇಂದ್ರದ ಮುಖ್ಯಸ್ಥ ದೇವೇಂದ್ರ ಜೈನರ್ ಮಾತನಾಡಿ, ‘ಹಲವು ವರ್ಷಗಳಿಂದ ಮಾವು ಮಾರಾಟ ಕೇಂದ್ರ ಸ್ಥಾಪನೆ ಬಗ್ಗೆ ಚರ್ಚೆ ನಡೆದಿದ್ದು, ಸರ್ಕಾರ ಈ ಕುರಿತು ಶೀಘ್ರ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು’ ಎಂದರು. ‘ಈ ಭಾಗದಲ್ಲಿ ಅತ್ಯುತ್ತಮ ಮಾವು ಬೆಳೆಯಲಾಗುತ್ತಿದೆ. ಆದರೆ, ಪ್ರತಿಬಾರಿ ಮಳೆ, ಗಾಳಿಗೆ ಸಿಲುಕಿ ಮಾವು ಬೆಳೆಗಾರರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ಸರ್ಕಾರ ಗಮನ ಹರಿಸಬೇಕು’ ಎಂದು ಮನವಿ ಮಾಡಿದರು. ಪಾಲಿಕೆ ಸದಸ್ಯ ಬಲರಾಮ ಕುಸುಗಲ್, ಮಾವು ಬೆಳೆಗಾರರಾದ ಶಿವಪುತ್ರಯ್ಯ ಗುಡ್ಡದಮಠ, ಈರಣ್ಣ ಹಳವದ, ಮುತ್ತು ಸಾದರ ಇದ್ದರು.