ದಾವಣಗೆರೆ: ಇಲ್ಲಿನ ಬಂಧೀಖಾನೆಯಲ್ಲಿ ಮಂಗಳವಾರ ತೆಂಗಿನ ಮರದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿಚಾರಣಾಧೀನ ಕೈದಿ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಹರಪನಹಳ್ಳಿಯ ನಿಂಗರಾಜ್ ಖಿನ್ನತೆಯಿಂದ ಬಳಲುತ್ತಿದ್ದ.
ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಿಂಗರಾಜ್ ವಿಚಾರಣೆ ಎದುರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.