ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮ ಮಳೆ: ಕೆರೆ ಕಟ್ಟೆಗಳಿಗೆ ನೀರು

Last Updated 29 ಮೇ 2018, 9:15 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಭಾನುವಾರ ಸಂಜೆ  ಭಾರಿ ಮಳೆ ಸುರಿಯಿತು. ತಾಲ್ಲೂಕಿನ ಮುತ್ತೂರು ಗ್ರಾಮದ ಬಳಿಯ ಕುರುಬನಕಟ್ಟೆಯ ಏರಿ ಒಡೆದ ಪರಿಣಾಮ ಸಮೀಪದ ದೊಂಡೆಕಟ್ಟೆ ಕೆರೆಗೆ ನೀರು ಹರಿದು ಒಂದೇ ದಿನದಲ್ಲಿ ಭರ್ತಿಯಾಗಿದೆ.

ಅರಣ್ಯದಂಚಿನ ಗ್ರಾಮಗಳಾದ ಸುಳಗೋಡು, ಕೋಗಿಲವಾಡಿ, ಚೌತಿ, ಕಾಳೇತಿಮ್ಮನಹಳ್ಳಿ, ಬೇಗೂರು ಮತ್ತಿತರರ ಗ್ರಾಮಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ನಿಂತಿದ್ದು ರೈತರಲ್ಲಿ ಸಂತಸ ಮೂಡಿದೆ.  ಆದರೆ, ಕೆಲವು ಜಮೀನಿನಲ್ಲಿ ನೀರು ನಿಂತಿದ್ದು ಶುಂಠಿ, ಮುಸುಕಿನ ಜೋಳದ ಬೆಳೆ ಕೊಳೆಯುವ ಭೀತಿ ಎದುರಾಗಿದೆ.

‘ಮೇನಲ್ಲಿ ತಾಲ್ಲೂಕಿನಾದ್ಯಂತ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದ್ದು ತಂಬಾಕು ಬೆಳೆಗೆ ಅನುಕೂಲವಾಗಿದೆ. ಆದರೆ, ಹೀಗೇ ಸತತವಾಗಿ ಮಳೆ ಮುಂದುವರೆದಲ್ಲಿ ತೇವಾಂಶ ಹೆಚ್ಚಳದಿಂದ ತಂಬಾಕು ಸಸಿಗಳು ಕೊಳೆಯುವ ಅಪಾಯವಿದೆ’ ಎಂದು ರೈತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT