‘ವಿಧಾನಸಭೆ ಚುನಾವಣೆಗೂ ಮೊದಲೇ ಮಹಿಳೆಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ನೀರು ಪಡೆಯುವುದಕ್ಕೂ ಬಿಡುತ್ತಿರಲಿಲ್ಲ. ಈ ವಿಷಯ ಗಮನಕ್ಕೆ ಬಂದಾಗ, ಸಮಸ್ಯೆ ಬಗೆಹರಿಸಿದ್ದೆ. ಅದರ ಮುಂದುವರಿದ ಭಾಗವಾಗಿ ಆಕೆಯನ್ನು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅದನ್ನು ತಡೆಯಲು ಹೋದ ನಮ್ಮತ್ತ ಕಲ್ಲು ತೂರಿದರು. ನಂತರ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಘಟನೆಗೆ ಸಂಬಂಧಿಸಿದಂತೆ 150 ಮಂದಿ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಯಾರನ್ನೂ ಬಂಧಿಸಿಲ್ಲ’ ಎಂದು ಇನ್ಸ್ಪೆಕ್ಟರ್ ನಿತ್ಯಾನಂದ ಪಂಡಿತ್ ‘ಪ್ರಜಾವಾಣಿ’ಗೆ ತಿಳಿಸಿದರು.