ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ದೂರು ದಾಖಲಾದ ತಕ್ಷಣ ರಾಜೇಂದ್ರ ಮತ್ತು ಡೇವಿಡ್ ಎಂಬುವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದ್ದು, ಉಳಿದ ಆರೋಪಿಗಳನ್ನು ಸಹ ಬಂಧಿಸಲಾಗುವುದು. ಮೂತ್ರಪಿಂಡ ವಿಫಲವಾಗಿರುವ ಬಗ್ಗೆ ವೈದ್ಯರು ವರದಿ ನೀಡಿದರೆ, ಕೊಲೆ ಯತ್ನ ಸೆಕ್ಷನ್ ಸೇರಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಕೇಶ್ವಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.