ಈ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ಸಂತೋಷ ಕೊಪ್ಪದ, ‘ಸೆಬಾಸ್ಟಿಯನ್, ಜೆಗದಾಸ್, ಶಿಜಾನ್, ತತೆಯೂಸ್ ಅವರನ್ನು ರಕ್ಷಿಸಲಾಗಿದೆ. ಎಲ್ಲರೂ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಅವರಿಗೆ ಹೊನ್ನಾವರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅರುಳ್ರಾಜ್ ಮತ್ತು ಪುಷ್ಪರಾಜ್ ಎಂಬುವವರಿಗಾಗಿ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಅವಘಡಕ್ಕೆ ನಿರ್ದಿಷ್ಟ ಕಾರಣವೇನೆಂಬುದು ಮೀನುಗಾರರ ವಿಚಾರಣೆಯಿಂದ ತಿಳಿಯಬೇಕಿದೆ’ ಎಂದು ತಿಳಿಸಿದ್ದಾರೆ.