ಶ್ಯಾಮಸುಂದರ್, ‘ದೋಷಾರೋಪ ಪಟ್ಟಿ ಸಲ್ಲಿಸಿದ ಕೂಡಲೇ ಜಾಮೀನು ನೀಡಲೇಬೇಕು ಎಂದೇನಿಲ್ಲ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವಷ್ಟು ಆರೋಪಿಯು ಪ್ರಬಲನಾಗಿದ್ದಾನೆ. ಪ್ರಕರಣದ ಇನ್ನೊಬ್ಬ ಆರೋಪಿ ಶ್ರೀಕೃಷ್ಣ ತಲೆಮರೆಸಿ ಕೊಂಡಿದ್ದಾನೆ. ಹೀಗಾಗಿ, ಜಾಮೀನು ನೀಡಬಾರದು’ ಎಂದು ಕೋರಿದ್ದರು. ನಲಪಾಡ್ ಪರ ಉಸ್ಮಾನ್ ವಾದ ಮಂಡಿಸಿ ನಲಪಾಡ್ಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರೂ ಸಾಕ್ಷಾಧಾರಗಳು ನಶಿಸಿ ಹೋಗುತ್ತವೆ ಎಂದು ಸೆಷನ್ಸ್ ಕೋರ್ಟ್ ಜಾಮೀನು ನೀಡದೆ ಅರ್ಜಿಯನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿದೆ.