‘ಐಸಿಸಿ ಭ್ರಷ್ಟಾಚಾರ ನಿಗ್ರಹ ಘಟಕ (ಎಸಿಯು) ದೊಡ್ಡ ತಿಮಿಂಗಿಲಗಳನ್ನು ಬಿಟ್ಟು, ಸಣ್ಣ ಮೀನು ಹಿಡಿದಿದೆ. ಅದರ ಕಾರ್ಯವೈಖರಿ ತೃಪ್ತಿಕರವಾಗಿಲ್ಲ. ಶ್ರೀಲಂಕಾ ಕ್ರಿಕೆಟ್ನ (ಎಸ್ಎಲ್ಸಿ) ಅಧ್ಯಕ್ಷರಾಗಿರುವ ತಿಲಾಂಗಾ ಸುಮತಿಪಾಲಾ ಅವರು ಐಸಿಸಿ ನಿಯಮಗಳನ್ನು ಗಾಳಿಗೆ ತೂರಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡುತ್ತಿದ್ದಾರೆ. ಈ ಸಂಬಂಧ ಎಸಿಯುಗೆ ನಾನು ಈ ಹಿಂದೆಯೇ ದೂರು ನೀಡಿದ್ದೆ. ಆದರೆ ಇದುವರೆಗೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದಿದ್ದಾರೆ.