ಬೆಂಗಳೂರು: ವಿಧಾನ ಪರಿಷತ್ನ 11 ಸ್ಥಾನಗಳಿಗೆ ಸ್ಪರ್ಧಿಸಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಸಿದರು.
ಜೆಡಿಎಸ್ ಬಿ.ಎಂ.ಫಾರೂಕ್, ಎಸ್.ಎಲ್.ಧರ್ಮೇಗೌಡ, ಬಿಜೆಪಿಯಿಂದ ರುದ್ರೇಗೌಡ, ರಘುನಾಥ ಮಲ್ಕಾಪುರೆ, ತೇಜಸ್ವಿನಿಗೌಡ, ಎನ್.ರವಿಕುಮಾರ್ ಹಾಗೂ ಕೆ.ಪಿ.ನಂಜುಂಡಿ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ನಿಂದ ಗೋವಿಂದರಾಜ್, ಸಿ.ಎಂ.ಇಬ್ರಾಹಿಂ, ಅರವಿಂದ ಕುಮಾರ ಅರಳಿ, ಹರೀಶ್ ಕುಮಾರ್ ನಾಮಪತ್ರ ಸಲ್ಲಿಸಿದರು.
* ಹಲವು ಕಡೆ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತಿದೆ. ಮೋದಿ ಅಲೆ ಇಲ್ಲ ಅವರ ವಿರೋಧಿ ಅಲೆ ಇದೆ. ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿದೆ. – ಸಿದ್ಧರಾಮಯ್ಯ, ಮಾಜಿ ಮುಖ್ಯಮಂತ್ರಿ