ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾತೆ- ಕ್ಯಾತೆ

Last Updated 31 ಮೇ 2018, 19:30 IST
ಅಕ್ಷರ ಗಾತ್ರ

‘ರಾಷ್ಟ್ರದ ಒಳಿತಿಗಾಗಿ ಮೈತ್ರಿ ಮಾಡಿಕೊಂಡಿದ್ದೇವೆ’ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಅದು ನಿಜವೇ ಆಗಿದ್ದರೆ ನಾಡಿನ ಸೇವೆಗಾಗಿ ಯಾರಿಗೆ ಯಾವ ಖಾತೆ ಸಿಕ್ಕರೂ ಜನತಾ ಸೇವೆಯ ಅವಕಾಶ ಸಿಕ್ಕಿದಂತೆ ಅಲ್ಲವೇ? ಹಾಗಿದ್ದ ಮೇಲೆ ಖಾತೆಗಾಗಿ ಯಾಕೆ ಈ ಕ್ಯಾತೆ?

ಡಿವಿಜಿಯವರ ಮಂಕುತಿಮ್ಮನ ಕಗ್ಗದಲ್ಲಿ ಬರುವ

‘ಸರಕಾರ ಹರಿಗೋಲು ತೆರೆಸುಳಿಗಳತ್ತಿತ್ತ

ಸುರೆ ಕುಡಿದವರು ಕೆಲರು ಹುಟ್ಟು ಹಾಕುವರು

ಬಿರುಗಾಳಿ ಬೀಸುವುದು, ಜನವೆದ್ದು ಕುಣಿಯುವುದು

ಉರುಳದಿಹುದಚ್ಚರಿಯೋ ಮಂಕುತಿಮ್ಮ’

ಎಂಬ ಸಾಲುಗಳು ಸಾರ್ವಕಾಲಿಕ ಸತ್ಯದಂತಿವೆ ಅಲ್ಲವೇ?

– ಅಲ್ಲಮಪ್ರಭು ಎಂ. ಎಸ್., ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT