ಪೇಜಾವರ ಮಠದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದಬಾರಿ ಕೆಲವರು ಮಠದಲ್ಲಿ ಇಫ್ತಾರ್ ಕೂಟ ಆಯೋಜಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ದೇವರ ಮೂರ್ತಿ ಇರುವ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸುವುದಕ್ಕೆ ಆಕ್ಷೇಪಗಳು ಕೇಳಿಬಂದಿತ್ತು. ಹಾಗಾಗಿ ಈ ಬಾರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಇಫ್ತಾರ್ ನಲ್ಲಿ ಭಾಗವಹಿಸುವ ಬಗ್ಗೆ ಮುಸ್ಲಿಂ ಮುಖಂಡರು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ,