ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ ರಾಜ್ಯಪಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಸಂಜೆ 4.30ಕ್ಕೆ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಇಲ್ಲಿನ ಹೋಟೆಲ್ ಲಲಿತ್ ಅಶೋಕದಲ್ಲಿ ಜಂಟಿ ಸುದ್ದಿಗೋಷ್ಢಿ ನಡೆಸಿ ಮಾತನಾಡಲಿದ್ದಾರೆ. ಸಮ್ಮಿಶ್ರ ಸರ್ಕಾರ ಮುನ್ನಡೆಸಲು ಮಾರ್ಗ ಹಾಕಿಕೊಡುವ ಸಮನ್ವಯ ಸಮಿತಿ ರಚನೆ, ಸಂಪುಟ ವಿಸ್ತರಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ.