ಈ ಹಿಂದೆ ಮಹಾಭಾರತದ ಕಾಲದಲ್ಲಿಯೇ ಪತ್ರಿಕೋದ್ಯಮ ಆರಂಭಗೊಂಡಿತ್ತು . ಹಸ್ತಿನಾಪುರದಲ್ಲಿ ಕುಳಿತ ಸಂಜಯ, ಕುರುಕ್ಷೇತ್ರ ಯುದ್ಧವನ್ನು ದೃತರಾಷ್ಟ್ರನಿಗೆ ವಿವರಿಸಿದ್ದ. ಇದು ನೇರಪ್ರಸಾರವಲ್ಲದೆ ಮತ್ತೇನು ಎಂದು ಹೇಳಿದ್ದರು, ಅಷ್ಟೇ ಅಲ್ಲದೆ ನಾರದರನ್ನು ಗೂಗಲ್ಗೆ ಹೋಲಿಕೆ ಮಾಡಿದ ಅವರು, ‘ಗೂಗಲ್ ಈಗಷ್ಟೇ ಆರಂಭವಾಗಿದೆ. ಆದರೆ ನಮ್ಮ ಗೂಗಲ್ ಬಹಳ ಹಿಂದೆಯೇ ಆರಂಭವಾಗಿತ್ತು. ನಾರದ ಮುನಿ ಮಾಹಿತಿಯ ಮೂರ್ತರೂಪವಾಗಿದ್ದರು. ನಾರದ ಎಂದು ಮೂರು ಬಾರಿ ಹೇಳುವ ಮೂಲಕ ಎಲ್ಲಿ, ಯಾವಾಗ ಬೇಕಾದರೂ ಹೋಗಿ ಮಾಹಿತಿ ನೀಡುತ್ತಿದ್ದರು’ ಎಂದು ಹೇಳಿದ್ದರು.