ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ ಸಭೆಗಳಲ್ಲಿ ಮೊಬೈಲ್ ನಿಷಿದ್ಧ

Last Updated 1 ಜೂನ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಜೊತೆ ನಿಗದಿತ ಸಭೆಗಳಲ್ಲಿ ಭಾಗವಹಿಸುವರು ಕಡ್ಡಾಯವಾಗಿ ಮೊಬೈಲ್ ತರದಂತೆ ಆದೇಶಿಸಲಾಗಿದೆ.

ಈ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ‘ಒಂದು ವೇಳೆ ಮೊಬೈಲ್‌ಗಳನ್ನು ತಂದವರು ಸಭೆಯ ಸಮನ್ವಯಾಧಿಕಾರಿಗೆ ಒಪ್ಪಿಸಿ, ಸಭೆಯ ನಂತರ ಪಡೆದುಕೊಳ್ಳಬೇಕು’ ಎಂದು ತಿಳಿಸಲಾಗಿದೆ.

‘ಸಭೆಗಳಲ್ಲಿ ಭಾಗವಹಿಸುವವರು ಮೊಬೈಲ್‌ ದೂರವಾಣಿ ಉಪಯೋಗಿಸುವುದರಿಂದ ಚರ್ಚೆಯಾಗುವ ವಿಷಯಗಳ ಮೇಲಿನ ಪ್ರಾಮುಖ್ಯತೆ ಕಡಿಮೆಯಾಗುತ್ತದೆ ಹಾಗೂ ವಿಷಯಾಂತರವಾಗುತ್ತದೆ. ಇದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT