ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಹಿರಿಯ ವಿಜ್ಞಾನಿ ಎ.ಆರ್.ಶಿವಕುಮಾರ್ ಮಾತನಾಡಿ, ‘ಸ್ಪರ್ಧಾತ್ಮಕ ವಿಜ್ಞಾನ ಕ್ಷೇತ್ರವು ಆಸಕ್ತಿಕರವಾದ ಕ್ಷೇತ್ರಗಳಲ್ಲಿ ಒಂದಾಗಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಂಡು ಸಂಶೋಧನೆಗಳತ್ತ ಆಸಕ್ತಿ ವಹಿಸಬೇಕು. ಜನಸಾಮಾನ್ಯರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುವಂತಹ ಸಂಶೋಧನೆಗಳನ್ನು ಕೈಗೊಂಡು ದೇಶದ ಪ್ರಗತಿಗೆ ಕೈ ಜೋಡಿಸಬೇಕು’ ಎಂದು ಕರೆ ನೀಡಿದರು.