ಅರಮನೆ ಬಳಿಯ ಕೋಟೆ ಮಾರಮ್ಮ ದೇವಸ್ಥಾನ ಬಳಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಉದ್ಘಾಟಿಸಬೇಕಿತ್ತು. ಆದರೆ, ಕಾರ್ಯಕ್ರಮದ ಆಹ್ವಾನ ಪತ್ರಿಕೆಯು ಒಡೆಯರ್ ಅವರಿಗೆ ತಲುಪದೆ ಇದ್ದ ಕಾರಣ ಅವರು ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ. ಬೆಳಿಗ್ಗೆ 7ಕ್ಕೇ ಆರಂಭವಾಗಬೇಕಿದ್ದ ಕಾರ್ಯಕ್ರಮ 9 ಗಂಟೆಯಾದರೂ ಆರಂಭವಾಗಲಿಲ್ಲ.