ನಂತರ ಆಸ್ಪತ್ರೆಯ ವೈದ್ಯಾಧಿಕಾರಿ ದಿನಕರ ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿಯೊಂದಿಗೆ ಕುಂದು–ಕೊರತೆಗಳ ಬಗ್ಗೆ ಚರ್ಚಿಸಿದರು. ‘ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸಾ ವೆಚ್ಚ ಇರುತ್ತದೆ. ಹೀಗಾಗಿ ಬಡವರು ಸರ್ಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ ಆದರೆ, ಇಲ್ಲಿನ ವೈದ್ಯರು, ಸಿಬ್ಬಂದಿ ರೋಗಿಗಳ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಇಲ್ಲಿನ ಅವ್ಯವಸ್ಥೆಯನ್ನು ನೋಡಿದರೆ ಜನರ ಆರೋಪ ಸರಿ ಇದೆ ಎನಿಸುತ್ತದೆ’ ಎಂದು ಶಾಸಕರು ತಿಳಿಸಿದರು.