‘ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸುವವರೆಗೂ ರಾಜಕೀಯ ಬಿಡಲಾರೆ. ಈ ಸಲದ ಚುನಾವಣೆಯಲ್ಲಿ ಜನರಿಗೆ ಪಕ್ಷದ ಬಗ್ಗೆ ಪ್ರೀತಿ ಇತ್ತು. ಆದರೆ, ಸರಿಯಾಗಿ ಅವರನ್ನು ತಲುಪಲಾಗಲಿಲ್ಲ. ಹೀಗಾಗಿ, ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಮುಂದಿನ ಚುನಾಣೆಯಲ್ಲಿ ಎಲ್ಲ ಆರೂ ಸ್ಥಾನಗಳು ಬಿಜೆಪಿ ತೆಕ್ಕೆಗೆ ಬರಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.