ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಲು ಹೋದ ಮೂರು ಮಕ್ಕಳ ಸಾವು

Last Updated 3 ಜೂನ್ 2018, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ತಾಲ್ಲೂಕಿನ ತಮ್ಮಡಿಹಳ್ಳಿ ಸಮೀಪದ ಜಂಗ್ಲಿ ಕೆರೆಯಲ್ಲಿ ಈಜಲು ಹೋದ ಮೂವರು ಮಕ್ಕಳು ಭಾನುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ತಮ್ಮಡಿಹಳ್ಳಿಯ ವಸಂತ್ (14), ಚಿರಂತ್ (14) ಹಾಗೂ ಅಜೇಯ(11) ಮೃತರು.

ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಜಂಗ್ಲಿ ಕೆರೆಯಲ್ಲಿ ಈಜಲು ಎಂಟು ಬಾಲಕರು ಹೋಗಿದ್ದಾರೆ. ಕೆಲ ದಿನಗಳಿಂದ ಮಳೆ ಸುರಿದಿದ್ದ ಪರಿಣಾಮ ಕೆರೆಗೆ ಸಾಕಷ್ಟು ನೀರು ಹರಿದುಬಂದಿತ್ತು. ನೀರಿನ ಆಳ ಅರಿಯದೇ ಮಕ್ಕಳು ಮುಳುಗಿದ್ದಾರೆ. ಉಳಿದವರು ಹೆದರಿ ಸ್ಥಳದಿಂದ ಓಡಿಹೋಗಿದ್ದಾರೆ.

‘ತಮ್ಮಡಿಹಳ್ಳಿಯಲ್ಲಿ ಭಾನುವಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ದೊಡ್ಡವರ‍್ಯಾರೂ ಸ್ಥಳದಲ್ಲಿ ಇರಲಿಲ್ಲ. ಹಾಗಾಗಿ, ಬಾಲಕರನ್ನು ರಕ್ಷಿಸಲು ಸಾಧ್ಯವಾಗಿಲ್ಲ’ ಎಂದು ಗ್ರಾಮಸ್ಥರು ಮಾಹಿತಿ ನೀಡಿದರು. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT