ಆ್ಯಪಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ತಿವಾರಿ ಅವರು ಶುಕ್ರವಾರ ರಾತ್ರಿ ಮಾಜಿ ಸಹೋದ್ಯೋಗಿ ಜತೆ ಕಾರಿನಲ್ಲಿ ತೆರಳುತ್ತಿದ್ದಾಗ ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿ ಹತ್ಯೆ ಮಾಡಿದ್ದರು.ಗುಂಡು ಹಾರಿಸಿದ ಪೇದೆಯನ್ನು ಪ್ರಶಾಂತ್ ಕುಮಾರ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ಕುಮಾರ್ ಗಸ್ತು ತಿರಗುತ್ತಿದ್ದ ಬೈಕಿಗೆ ವಿವೇಕ್ ತಿವಾರಿ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಶಾಂತ್ ಏಕಾಏಕಿ ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ವಿವೇಕ್ ತಿವಾರಿ ಸ್ಥಳದಲ್ಲೇ ಮೃತಪಟ್ಟಿದ್ದರು.ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾಗಿಪ್ರಶಾಂತ್ ಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.