ಹೊಸಪೇಟೆ: ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.
600 ಮೀಟರ್ ಓಟ, 200 ಮೀ. ಓಟ, 100 ಮೀ. ಓಟ, ಎತ್ತರ ಜಿಗಿತ, ಚಕ್ರ ಎಸೆತ, ಉದ್ದ ಜಿಗಿತ, ರಿಲೇ ಸ್ಪರ್ಧೆ, ಗುಂಡು ಎಸೆತ ಸ್ಪರ್ಧೆಗಳು ನಡೆದವು. ಏಳು ತಾಲ್ಲೂಕಿನ 500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜೋಗದ ನೀಲಮ್ಮ ಉದ್ಘಾಟಿಸಿ, ‘ಮಕ್ಕಳು ಪಠ್ಯಕ್ಕಷ್ಟೇ ಸೀಮಿತರಾಗಬಾರದು. ಯಾವ ಕ್ರೀಡೆಯಲ್ಲಿ ಆಸಕ್ತಿ ಇದೆಯೋ ಅದರಲ್ಲಿ ಮುಂದುವರಿಯಬೇಕು. ಅದರಲ್ಲಿ ಉತ್ತಮ ಸಾಧನೆ ಮಾಡಿ ದೇಶಕ್ಕೆ ಹೆಸರು ತರಬಹುದು’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಆನಂದ್, ಜಯಕುಮಾರಿ, ಡಿ.ಡಿ.ಪಿ.ಐ. ಶ್ರೀಧರನ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ. ಜೋಶಿ, ಕ್ಷೇತ್ರ ಸಮನ್ವಯಾಧಿಕಾರಿ ಗುರುರಾಜ್, ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್. ಗಣೇಶ್, ಕಾಂಗ್ರೆಸ್ ಮುಖಂಡರಾದ ರತನ್ ಸಿಂಗ್, ಧರ್ಮೇಂದ್ರ ಸಿಂಗ್ ಇದ್ದರು.