ಮೃತರು ತಾಲ್ಲೂಕಿನ ಅರೆಹಳ್ಳಿ ನಿವಾಸಿಗಳಾಗಿದ್ದು, ವಿರಾಜ ಪೇಟೆಯಲ್ಲಿ ನೆಲೆಸಿದ್ದಾರೆ. ಅರೆಹಳ್ಳಿಯಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿರಾಜಪೇಟೆಯಿಂದ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಸರೋಜಮ್ಮ ಅವರ ಮಗ ಸುರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.