ದಾವಣಗೆರೆ: ‘104 ಕ್ಷೇತ್ರಗಳಲ್ಲಿ ಗೆದ್ದರೂ ಬಿಜೆಪಿಗೆ ಅಧಿಕಾರ ಹಿಡಿಯಲು ಆಗಲಿಲ್ಲ ಎಂಬ ಬೇಸರ ರಾಜ್ಯದ ಜನರಲ್ಲಿ ಮೂಡಿದೆ. ಅವಕಾಶವಾದಿ, ಅನುಕೂಲಸಿಂಧು ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್–ಜೆಡಿಎಸ್ ಮುಖಂಡರು ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಲಿ. ನಾವು 150 ಕ್ಷೇತ್ರ ಗೆದ್ದು ತೋರಿಸುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದರು.