ಚರಂಡಿಯ ದುರ್ವಾಸನೆಯಿಂದ ಸೊಳ್ಳೆಗಳು ಹೆಚ್ಚಿ ಸಾಂಕ್ರಮಿಕ ರೋಗಗಳ ಭೀತಿ ಎದುರಿಸುವಂತಾಗಿದೆ. ಇಲ್ಲಿನ ಕೆಲ ನಿವಾಸಿಗಳಿಗೆ ಮಲೇರಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರಸಭೆ ಸದಸ್ಯ ಹಾಜಿ ಮಸ್ತಾನ್ ಅವರ ಗಮನಕ್ಕೆ ತರಲಾಗಿದೆಯಾದರೂ ಸ್ಯಾನೆಟರಿ ಇನ್ಸ್ಪೆಕ್ಟರ್ ಅವರನ್ನು ಕಳುಹಿಸುತ್ತೇನೆ ಎಂದು ಹೇಳುತ್ತಾರೆ. ಯಾರನ್ನೂ ಕಳುಹಿಸಿಲ್ಲ. ಇನ್ನಾದರೂ ನಗರಸಭೆ ಅಧಿಕಾರಿಗಳು, ಸದಸ್ಯರು ಚರಂಡಿ ಸ್ವಚ್ಛಗೊಳಿಸುವತ್ತ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿ ಅನ್ವರ್ ಹುಸೇನ್ ಒತ್ತಾಯಿಸಿದ್ದಾರೆ.