ಕಲಬುರ್ಗಿ: ಹಿಂದುಳಿದಿರುವಿಕೆ ಹೋಗಲಾಡಿಸಲು ಹೈದರಾಬಾದ್ ಕರ್ನಾಟಕ ಹಾಗೂ ಉತ್ತರ ಕರ್ನಾಟಕಕ್ಕೆ ಎರಡು ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು.
ಹೈದರಾಬಾದ್ ಕರ್ನಾಟಕದ ಉಪ ಮುಖ್ಯಮಂತ್ರಿಗೆ ಹಣಕಾಸು ಇಲಾಖೆ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ರಜನಿಕಾಂತ್ ಅಭಿನಯದ ‘ಕಾಲಾ’ ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಅವಕಾಶ ನೀಡುವುದಿಲ್ಲ. ಜೂ.7ರಂದು ಬೆಂಗಳೂರಿನಲ್ಲಿ ಚಿತ್ರ ಪ್ರದರ್ಶನ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.