ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಸ್ಪತ್ರೆಯಿಂದಲೇ ಪರ‍್ರೀಕರ್ಕಡತ ಪರಿಶೀಲನೆ’

Last Updated 29 ಸೆಪ್ಟೆಂಬರ್ 2018, 19:31 IST
ಅಕ್ಷರ ಗಾತ್ರ

ಪಣಜಿ: ಗೋವಾ ಮುಖ್ಯಮಂತ್ರಿಮನೋಹರ ಪರ‍್ರೀಕರ್ ಅವರು ದೆಹಲಿಯ ಏಮ್ಸ್‌ಗೆದಾಖಲಾಗಿದ್ದರೂ, ಅಲ್ಲಿಂದಲೇ ಕಡತಗಳನ್ನು ಪರಿಶೀಲಿಸುತ್ತಿರುವುದರಿಂದ, ಆಡಳಿತಾತ್ಮಕ ಕಾರ್ಯಗಳಿಗೆ ಯಾವುದೇ ಅಡ್ಡಿಯಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸುದಿನ್ ಧವಳೀಕರ್ ಶನಿವಾರ ಹೇಳಿದ್ದಾರೆ.

‘ಪರ‍್ರೀಕರ್‌ ನಿರ್ದೇಶ ನದಂತೆ ಪ್ರತಿ ಬುಧವಾರ ಸಂಪುಟ ಸದಸ್ಯರು ಪರಿಶೀಲನಾ ಸಭೆ ನಡೆಸಿ, ಆಡಳಿತಾತ್ಮಕ ವಿಷಯಗಳನ್ನು ಚರ್ಚಿಸುತ್ತಾರೆ. ಸಭೆಯಲ್ಲಿ ಮಂಡಿಸಲಾದ ವಿಷಯಗಳ ಕುರಿತು ನಂತರ ಅವರಿಗೆ ವರದಿ ಸಲ್ಲಿಸಲಾಗುತ್ತದೆ’ ಎಂದು ವಿವರಿಸಿದ್ದಾರೆ.

‘ನಾವು ಎಲ್ಲ ಸಚಿವರೂ ಸಮರ್ಥರಾಗಿದ್ದು ರಾಜ್ಯದ ಎಲ್ಲ ವಿಷಯಗಳನ್ನೂ ನಿರ್ವಹಿಸುತ್ತಿದ್ದೇವೆ. ಆಡಳಿತಾತ್ಮಕ ಕಾರ್ಯದ ಮೇಲ್ವಿಚಾರಣೆಯನ್ನು ಮುಖ್ಯ ಕಾರ್ಯದರ್ಶಿ ನೋಡಿಕೊಳ್ಳುತ್ತಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT